CrimeDistrictsRaichur

ಟ್ರ್ಯಾಕ್ಟರ್‌ಗೆ ಬೈಕ್ ಡಿಕ್ಕಿ- ಸವಾರ ಸ್ಥಳದಲ್ಲೇ ಸಾವು

ಜಿಲ್ಲೆಯ ಸಿಂಧನೂರಿನ ಕನ್ನಾರಿ ಕ್ರಾಸ್ ಬಳಿ ಕಬ್ಬು ಸಾಗಿಸುತ್ತಿದ್ದ ಟ್ರ್ಯಾಕ್ಟರ್‌ಗೆ (Tractor) ಹಿಂಬದಿಯಿಂದ ಬೈಕ್ (Bike) ಡಿಕ್ಕಿ ಹೊಡೆದು ಬೈಕ್ ಸವಾರ ಸ್ಥಳದಲ್ಲೇ ಸಾವನ್ನಪ್ಪಿದ ಘಟನೆ ರಾಯಚೂರಿನಲ್ಲಿ (Raichur) ನಡೆದಿದೆ.

ದಢೇಸೂಗೂರಿನ ಶಿವರಾಜಸ್ವಾಮಿ (30) ಅಪಘಾತದಲ್ಲಿ ಮೃತಪಟ್ಟಿರುವ ದುರ್ದೈವಿ ಬೈಕ್ ಸವಾರ. ಶಿವನಂದಿ ಟ್ರಾವೆಲ್ಸ್ ಮಾಲೀಕನಾಗಿದ್ದ ಶಿವರಾಜಸ್ವಾಮಿ ಅತೀವೇಗದಲ್ಲಿ ಹಿಂಬದಿಯಿಂದ ಟ್ರಾಕ್ಟರ್‌ಗೆ ಡಿಕ್ಕಿ ಹೊಡಿದಿದ್ದಾನೆ.

ಡಿಕ್ಕಿಯ ರಭಸಕ್ಕೆ ತಲೆಗೆ ಬಲವಾಗಿ ಪೆಟ್ಟು ಬಿದ್ದಿದ್ದು, ಗಂಭೀರ ಗಾಯಗಳಿಂದ ಸ್ಥಳದಲ್ಲೇ ಸಾವನ್ನಪ್ಪಿದ್ದಾನೆ. ಘಟನೆಗೆ ಸಂಬಂಧಿಸಿ ಸಿಂಧನೂರು ಗ್ರಾಮೀಣ ಪೊಲೀಸ್ ಠಾಣೆಯಲ್ಲಿ ಪ್ರಕರಣ ದಾಖಲಾಗಿದೆ. ಮೃತ ದೇಹವನ್ನು ಮರಣೋತ್ತರ ಪರೀಕ್ಷೆಗಾಗಿ ಶವಾಗಾರಕ್ಕೆ ರವಾನಿಸಲಾಗಿದೆ.

Show More

Related Articles

Leave a Reply

Your email address will not be published. Required fields are marked *

Back to top button