
ತೈಲ ದರ ಏರಿಕೆ ಖಂಡಿಸಿ ಸರ್ಕಾರದ ವಿರುದ್ಧ ಬಿಜೆಪಿ (BJP) ನಾಯಕರು ರಸ್ತೆಗಿಳಿದಿದ್ದಾರೆ. ಇಂದು ನಗರದ ಬಿಜೆಪಿ ಕಚೇರಿಯಿಂದ ವಿಧಾನಸೌಧದ ವರೆಗೆ ನಾಯಕರು ಸೈಕಲ್ ಜಾಥಾ (Cycle Jatha) ನಡೆಸಿದರು. ಆದರೆ ಇದಕ್ಕೆ ಅವಕಾಶ ಮಾಡಿಕೊಡದ ಪೊಲೀಸರು, ಪ್ರತಿಭಟನಾಕಾರರನ್ನು ವಶಕ್ಕೆ ಪಡೆದಿದ್ದಾರೆ.
ಬಿಜೆಪಿಯವರ ಸೈಕಲ್ ಜಾಥಾ ತಡೆಗೆ ಭಾರೀ ಪೊಲೀಸ್ ಬಂದೋಬಸ್ತ್ ಕಲ್ಪಿಸಲಾಗಿತ್ತು. ಬಿಜೆಪಿ ಕಚೇರಿ ಎದುರು 3 ಪೊಲೀಸ್ ವ್ಯಾನ್, 1 ಬಿಎಂಟಿಸಿ ಬಸ್, 4 ಪೊಲೀಸ್ ಜೀಪ್ಗಳನ್ನು ತಂದು ನಿಲ್ಲಿಸಲಾಗಿತ್ತು. ಬಿಜೆಪಿ ಕಚೇರಿ ಎದುರಿನ ರಸ್ತೆಯಲ್ಲಿ ಪೊಲೀಸ್ ನಾಕಾಬಂದಿ ಹಾಕಲಾಗಿತ್ತು. ಕಚೇರಿ ಎದುರಿನ ರಸ್ತೆಗೆ ಎರಡೂ ಕಡೆ ಬ್ಯಾರಿಕೇಡ್ ಹಾಕಿ ಬಂದ್ ಮಾಡಲಾಗಿತ್ತು.
ಪ್ರತಿಭಟನೆಗೆ 150 ಸೈಕಲ್ಗಳನ್ನು ಬಿಜೆಪಿ ನಾಯಕರು ಬಾಡಿಗೆಗೆ ತಂದಿದ್ದರು. ಸಿಲ್ಕ್ ಬೋರ್ಡ್ ಬಳಿ ಇರುವ ‘ಸೈಕಲ್ ಟು ಗೋ’ ಸಂಸ್ಥೆಯಿಂದ ಸೈಕಲ್ಗಳನ್ನು ಬಾಡಿಗೆಗೆ ಪಡೆದಿದ್ದರು. ಆದರೆ ಪ್ರತಿಭಟನಾಕಾರರನ್ನು ಬಿಜೆಪಿ ಕಚೇರಿ ದಾಟದಂತೆ ಪೊಲೀಸರು ತಡೆದರು. ಬಿಜೆಪಿ ಕಚೇರಿ ಎದುರೇ ಎಲ್ಲ ಪ್ರತಿಭಟನಾಕಾರರನ್ನು ವಶಕ್ಕೆ ಪಡೆದರು.