
ರಾಮನಗರ: ಭಾರತೀಯ ಜನತಾ ಪಕ್ಷ. ಭ್ರಷ್ಟಾಚಾರದ ಗಂಗೋತ್ರಿ, ಆ ಪಕ್ಷದಲ್ಲಿ ಇರುವವರೆಲ್ಲರೂ ಭ್ರಷ್ಟರೇ ಆಗಿದ್ದಾರೆ ಎಂದು ಸಾರಿಗೆ ಮತ್ತು ಮುಜರಾಯಿ ಸಚಿವ ರಾಮಲಿಂಗಾ ರೆಡ್ಡಿ ವಾಗ್ದಾಳಿ ನಡೆಸಿದ್ದಾರೆ.
ಚನ್ನಪಟ್ಟಣದಲ್ಲಿ ಕಾಂಗ್ರೆಸ್ ಜನಾಂದೋಲನ ಸಭೆಯಲ್ಲಿ ಮಾತನಾಡಿದ ಸಚಿವ ರಾಮಲಿಂಗಾ ರೆಡ್ಡಿ, ಬಿಜೆಪಿ – ಜೆಡಿಎಸ್ ಭ್ರಷ್ಟಾಚಾರದ ವಿರುದ್ಧ ಪಾದಯಾತ್ರೆ ಮಾಡುತ್ತಿದ್ದಾರೆ. ಬಿಜೆಪಿ ಎಂದರೆ ಭ್ರಷ್ಟ ಜನತಾ ಪಕ್ಷ. ಭ್ರಷ್ಟಾಚಾರದ ಗಂಗೋತ್ರಿ ಬಿಜೆಪಿ. ಅಳ್ಲಿರುವವರೆಲ್ಲ ಭ್ರಷ್ಟರೇ, ಅವರನ್ನು ಕಡು ಭ್ರಷ್ಟರು ಎಂದರೆ ತಪ್ಪಿಲ್ಲ ಎಂದರು.
ದೇಶದಲ್ಲಿ ಭ್ರಷ್ಟಾಚಾರದ ಆರೋಪ ಹೊತ್ತವರೆಲ್ಲರನ್ನೂ ಬಿಜೆಪಿಗೆ ಸೇರಿಸಿಕೊಳ್ಳುತ್ತಿದ್ದಾರೆ. ಅದೇ ಭ್ರಷ್ಟರು ಇಂದು ಭ್ರಷ್ಟಾಚಾರದ ವಿರುದ್ಧ ಹೋರಾಟ ಮಾಡುತ್ತಿದ್ದಾರೆ. ಅವರದು ಬುರುಡೆ ಪಕ್ಷ. ಪ್ರಧಾನಿಗಳಿಂದ ಎಲ್ಲರೂ ಬುರುಡೆ ಬಡುತ್ತಲೇ ಇರುತ್ತಾರೆ. ಬಿಜೆಪಿಯವರು ಸುಳ್ಳನ್ನೇ ನೂರು ಬಾರಿ ಹೇಳಿ ನಿಜ ಮಾಡುತ್ತಾರೆ. ಇವರು ಸಿದ್ದರಾಮಯ್ಯ ಅವರ ವಿರುದ್ಧ ಅಫಪ್ರಚಾರ ಮಾಡುತ್ತಿದ್ದು, ಇವರ ಈ ಪ್ರಯತ್ನದ ವಿರುದ್ಧ ನಮ್ಮ ಪಕ್ಷದ ನಾಯಕರು ಜನಾಂದೋಲನ ಸಭೆ ಮಾಡುತ್ತಿದ್ದಾರೆ ಎಂದು ರಾಮಲಿಂಗ ರೆಡ್ಡಿ ಹೇಳಿದರು.